ADVERTISEMENT

ಬಿಬಿಎಂಪಿ ಚುನಾವಣೆಗೆ ತಯಾರಿ: ಆರ್. ಅಶೋಕ್

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 18:52 IST
Last Updated 7 ಸೆಪ್ಟೆಂಬರ್ 2020, 18:52 IST
ಆರ್‌. ಅಶೋಕ
ಆರ್‌. ಅಶೋಕ    

ಬೊಮ್ಮನಹಳ್ಳಿ: ‘ಬಿಬಿಎಂಪಿ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಸಿಲ್ಕ್‌ಬೋರ್ಡ್‌ ಸಂಚಾರ ದಟ್ಟಣೆಗೆ ಪರಿಹಾರ ನೀಡುವ ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ಬೈಪಾಸ್‌ ರಸ್ತೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ಬಿಬಿಎಂಪಿ ಮಸೂದೆ ಬಗ್ಗೆ ಚರ್ಚಿಸಲು ಜಂಟಿ ಸಲಹಾ ಸಮಿತಿ ರಚನೆ ಮಾಡಲಾಗಿದೆ. ವಾರ್ಡ್‌ಗಳ ಪುನಾರಚನೆಯಂತಹ ಕಾರ್ಯಗಳು ಅಧಿಕಾರಿಗಳಿಗೆ ಸಂಬಂಧಿಸಿದ್ದು’ ಎಂದರು.

‘ಬೊಮ್ಮನಹಳ್ಳಿ– ಬಿ.ಟಿ.ಎಂ ಲೇಔಟ್‌ ರಸ್ತೆ ನಿರ್ಮಾಣದ ಮೊದಲ ಹಂತ ಪೂರ್ಣವಾಗಿದೆ. ಬೆಂಗಳೂರು ನಗರ ನಿರೀಕ್ಷೆಗೂ ಮೀರಿ ಬೆಳೆಯುತ್ತಿದೆ. ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ಶ್ರಮ ವಹಿಸುತ್ತಿದೆ’ ಎಂದರು.

ADVERTISEMENT

‘ಬೊಮ್ಮಹಳ್ಳಿ ಹಾಗೂ ಬಿಟಿಎಂ ಪ್ರದೇಶದ ಜನರ ಅನುಕೂಲಕ್ಕಾಗಿ ಗುಣಮಟ್ಟದ ರಸ್ತೆ ನಿರ್ಮಿಸಲಾಗಿದೆ’ ಎಂದು ಉಪಮೇಯರ್ ಸಿ.ಆರ್.ರಾಮಮೋಹನ್ ರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.