ಬೆಂಗಳೂರು: ಮೇಯರ್ ಗಂಗಾಂಬಿಕೆ ಅವರು ಬೊಮ್ಮನಹಳ್ಳಿ ವಲಯದ ಬಿಳೇಕಹಳ್ಳಿ ವಾರ್ಡ್ನ ಅನುಗ್ರಹ ಬಡಾವಣೆಯಲ್ಲಿ ಶುಕ್ರವಾರ ತಪಾಸಣೆ ನಡೆಸಿದರು.
ಜಲಮಂಡಳಿಯಿಂದ ಈ ಬಡಾವಣೆಯಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದಾಗಿ ಒಳಚರಂಡಿ ನೀರು ರಸ್ತೆ ಮತ್ತು ಮೇಲು ಗಾಲುವೆಗಳಲ್ಲೇ ಹರಿಯುತ್ತಿದೆ. ಮಳೆ ಬಂದಾಗ ಈ ನೀರು ತಗ್ಗು ಪ್ರದೇಶದ ಮನೆ ಮತ್ತು ನೀರಿನ ಟ್ಯಾಂಕ್ಗಳಿಗೆ ಸೇರುವ ಆತಂಕವಿದ್ದು, ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಜಲ ಮಂಡಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಆಪ್ಟಿಕಲ್ ಫೈಬರ್ ಕೇಬಲ್ ಅವಡಿಸಲು ರಸ್ತೆಗಳನ್ನು ಅಗೆದು ಹಾಳು ಮಾಡಲಾಗಿದೆ. ಸರಿಪಡಿಸಿ ಡಾಂಬರ್ ಹಾಕುವಂತೆ ಸ್ಥಳದಲ್ಲೇ ಇದ್ದ ಮುಖ್ಯ ಎಂಜಿನಿಯರ್ಗೆ ಸೂಚನೆ ನೀಡಿದರು. ರಸ್ತೆ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ನಿಂದ ಸಾರ್ವಜನಿಕರಿಗೆ ಅಪಾಯವಾಗುವ ಸಾಧ್ಯತೆ ಇದ್ದು, ಬದಲಾವಣೆ ಮಾಡುವಂತೆ ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.