ADVERTISEMENT

ಪಾದಚಾರಿ ಮಾರ್ಗಗಳು ಹಾಳಾಗಿದ್ದರೆ ಮಾತ್ರ ದುರಸ್ತಿ

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥಪ್ರಸಾದ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 19:04 IST
Last Updated 2 ಆಗಸ್ಟ್ 2019, 19:04 IST
   

ಬೆಂಗಳೂರು:ಸುಸ್ಥಿತಿಯಲ್ಲಿರುವ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿಸಾರ್ವಜನಿಕ ಹಣವನ್ನು ವೆಚ್ಚ ಮಾಡಿದರೆ ಸಂಬಂಧಪಟ್ಟ ಎಂಜಿನಿಯರ್‌ಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

‘ಪಾದಚಾರಿ ಮಾರ್ಗಗಳನ್ನು ಖುದ್ದು ಪರಿಶೀಲನೆ ನಡೆಸಿ ಹಾಳಾಗಿದ್ದರೆ ಮಾತ್ರ ದುರಸ್ತಿಪಡಿಸಬೇಕು. ಸಂಪೂರ್ಣ ಹಾಳಾಗಿದ್ದರೆ ಮುಖ್ಯ ಎಂಜಿನಿ ಯರ್ ಅವರಿಂದ ದೃಢೀಕರಣ ಪಡೆದು ಅಭಿವೃದ್ಧಿಪಡಿಸಬೇಕು. ಅನಾವಶ್ಯಕವಾಗಿ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸಿದ್ದು ಕಂಡು ಬಂದರೆ ಕರ್ತವ್ಯ ಲೋಪ ಎಂದು ಪರಿಗಣಿಸಿ ಸಂಬಂಧಪಟ್ಟ ಎಂಜಿನಿಯರ್ ವಿರುದ್ಧ ಶಿಸ್ತು ಕ್ರಮಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.