ಬೆಂಗಳೂರು: ಹೆಬ್ಬಾಳ ಕೆರೆಯ ಮೀಸಲು ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಶೆಡ್ ತೆರವುಗೊಳಿಸುವಂತರೆ ಬಿಬಿಎಂಪಿ ಅಧಿಕಾರಿಗಳು ಮಾಲೀಕರಿಗೆ ಸೂಚನೆ ನೀಡಿದ್ದಾರೆ.
ಕೆರೆ ಪಕ್ಕದ ಜಾಗವು ಕಂದಾಯ ಇಲಾಖೆ ದಾಖಲೆ ಪ್ರಕಾರ ಖಾಸಗಿ ಸ್ವತ್ತು. ಆದರೆ, ಅರಣ್ಯ ಇಲಾಖೆಯ ದಾಖಲೆ ಪ್ರಕಾರ ಕೆರೆಯ ಮೀಸಲು ಪ್ರದೇಶವಾಗಿದೆ. ಈ ಬಗ್ಗೆ ಬಿಬಿಎಂಪಿಯ ಕಂದಾಯ ವಿಭಾಗ, ಅರಣ್ಯ ಇಲಾಖೆ ಹಾಗೂ ಕೆರೆ ಸಂರಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಅಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಶೆಡ್ ನಿರ್ಮಿಸಿದ್ದ ಸ್ವಲ್ಪ ಜಾಗವು ಕೆರೆಯ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ‘ಹೆಬ್ಬಾಳ ಕೆರೆಯ ಮೀಸಲು ಪ್ರದೇಶದಲ್ಲಿ ಶೆಡ್ ನಿರ್ಮಿಸಿದ ಖಾಸಗಿ ವ್ಯಕ್ತಿಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.