ADVERTISEMENT

‘ಅನಧಿಕೃತ ಕೊಳವೆ ಬಾವಿ ಕೊರೆದರೆ ಕ್ರಮ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 20:42 IST
Last Updated 21 ಸೆಪ್ಟೆಂಬರ್ 2019, 20:42 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿಗಳನ್ನು ಕೊರೆಸುವ ಕಟ್ಟಡದ ಮಾಲೀಕರ ಮತ್ತು ಕೊಳವೆ ಬಾವಿ ಡ್ರಿಲ್ಲಿಂಗ್‌ ಏಜೆನ್ಸಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳ ಲಾಗುವುದು ಎಂದು ಜಲಮಂಡಳಿ ಎಚ್ಚರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ದಾಗಿ ಕೊಳವೆ ಬಾವಿಗಳನ್ನು ಕೊರೆಯ ಬೇಕಾದಲ್ಲಿ ರಾಜ್ಯ ಅಂತರ್ಜಲ ಪ್ರಾಧಿ ಕಾರದಿಂದ ರಚಿಸಲಾಗಿರುವ ಬಿಬಿಎಂಪಿ ಸಮಿತಿಯಲ್ಲಿ ಅನುಮತಿ ಪಡೆಯಬೇಕು. ಈ ಸಮಿತಿಯಲ್ಲಿ ಬಿಬಿಎಂಪಿ, ಪೊಲೀಸ್‌ ಇಲಾಖೆ, ಬೆಸ್ಕಾಂ, ಜಲಮಂಡಳಿ, ಅಂತರ್ಜಲ ಪ್ರಾಧಿಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸದಸ್ಯರಾಗಿರುತ್ತಾರೆ.

ಅನಧಿಕೃತವಾಗಿ ಕೊಳವೆ ಬಾವಿಗಳನ್ನು ಕೊರೆಯುವುದು ಕಂಡು ಬಂದಲ್ಲಿ ಸಾರ್ವಜನಿಕರು ಈ ಇಲಾಖೆಗಳಿಗೆ ದೂರು ನೀಡಬಹುದು ಎಂದು ಜಲಮಂಡಳಿ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.