ಬೆಂಗಳೂರು:ಬಿಬಿಎಂಪಿಯ ನೂತನ ಆಯುಕ್ತರಾಗಿ ಬಿ.ಹೆಚ್.ಅನಿಲ್ ಕುಮಾರ್ ನೇಮಕ ಮಾಡಲಾಗಿದ್ದುಹಾಲಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆಗಿದ್ದ ಅನಿಲ್ ಕುಮಾರ್ ಅವರು ಬಿಬಿಎಂಪಿಯ ನೂತನ ಆಯುಕ್ತರಾಗಿದ್ದಾರೆ.
ಎಂ. ಮಹೇಶ್ವರ್ ರಾವ್ ಅವರನ್ನು ಜಲಮಂಡಳಿ ಅಧ್ಯಕ್ಷರನ್ನಾಗಿ ಹಾಗೂ ಹರ್ಷ ಗುಪ್ತಾ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಮನೋಜ್ ಕುಮಾರ್ ಮೀನಾ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.