ADVERTISEMENT

ಬಿಬಿಎಂಪಿ ಚುನಾವಣೆ: ವಿವಿಧೆಡೆ ಸಂವಾದ

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 19:33 IST
Last Updated 9 ಜನವರಿ 2020, 19:33 IST

ಬೆಂಗಳೂರು: ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷವು (ಎಎಪಿ) ಜ.11 ಮತ್ತು ಜ.12ಕ್ಕೆ ನಗರದ ವಿವಿಧ ವಾರ್ಡ್‌ಗಳಲ್ಲಿಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪಕ್ಷದ ಬಿಬಿಎಂಪಿ ಚುನಾವಣೆ ಅಭಿಯಾನದ ಉಸ್ತುವಾರಿ ಶಾಂತಲಾ ದಾಮ್ಲೆ ಮಾತನಾಡಿ, ‘ಜ್ಞಾನಭಾರತಿ ವಾರ್ಡ್‌ಗೆ ಎಸ್‌.ಸತೀಶ್, ಕಾಡುಗೋಡಿ ವಾರ್ಡ್‌ಗೆ ಮುನೇಂದ್ರ, ಬಾಪೂಜಿನಗರ ವಾರ್ಡ್‌ಗೆ ಕೆ.ರಾಜೇಂದ್ರ ಹಾಗೂ ರಾಜಾಜಿನಗರ ವಾರ್ಡ್‌ಗೆ ಗುರುಮೂರ್ತಿ ಅವರನ್ನು ವಾರ್ಡ್‌ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ವಾರ್ಡ್‌ಗಳಲ್ಲಿ ಸಂಜೆ 6 ಗಂಟೆಗೆ ಜನಸಂವಾದ ಕಾರ್ಯಕ್ರಮಗಳು ಹಾಗೂ ಕಿರುಚಿತ್ರ ಪ್ರದರ್ಶನಗಳು ನಡೆಯಲಿವೆ’ ಎಂದರು.

‘ಸಂವಾದದಲ್ಲಿ ನವ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚೆಗಳನ್ನು ನಡೆಸಿ, ‘ಹೊಸ ಬೆಂಗಳೂರು’ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ದೆಹಲಿಯಲ್ಲಿ ನಮ್ಮ ಸರ್ಕಾರ ಮಾಡಿದ ಸಾಧನೆಗಳನ್ನೂ ಅನಾವರಣ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.