ADVERTISEMENT

ಅಕ್ಟೋಬರ್ ಒಳಗೆ ಬಿಬಿಎಂಪಿ ಚುನಾವಣೆ

ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ: ಸಚಿವ ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 20:06 IST
Last Updated 25 ಜೂನ್ 2022, 20:06 IST
ಅಂದ್ರಹಳ್ಳಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಯಲಹಂಕ ರಾಮಕೃಷ್ಣ ವೇದಾಂತ ಆಶ್ರಮದ ಅಭಯಾನಂದ ಮಹಾರಾಜ್, ಬೆಸ್ಕಾಂ ಎಂಜಿನಿಯರ್ ರಮೇಶ್, ಕುಮಾರ್ ನಾಯಕ್, ಮಹಾಂತೇಶ್, ಬಸವರಾಜ ಇದ್ದರು.
ಅಂದ್ರಹಳ್ಳಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಯಲಹಂಕ ರಾಮಕೃಷ್ಣ ವೇದಾಂತ ಆಶ್ರಮದ ಅಭಯಾನಂದ ಮಹಾರಾಜ್, ಬೆಸ್ಕಾಂ ಎಂಜಿನಿಯರ್ ರಮೇಶ್, ಕುಮಾರ್ ನಾಯಕ್, ಮಹಾಂತೇಶ್, ಬಸವರಾಜ ಇದ್ದರು.   

ರಾಜರಾಜೇಶ್ವರಿನಗರ: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನುಅಕ್ಟೋಬರ್‌ ಒಳಗೆ ನಡೆಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಅಂದ್ರಹಳ್ಳಿಯಲ್ಲಿ ಬೆಸ್ಕಾಂ ಹಾಗೂ ವಿದ್ಯುತ್ ವಾಣಿ ಪರಿಸರ ಸಂಘಟನೆ ಆಶ್ರಯದಲ್ಲಿ ಶನಿವಾರ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸುಪ್ರೀಂ ಕೋರ್ಟ್ ಆದೇಶದಂತೆ ಅಕ್ಟೋಬರ್‌ ಒಳಗಾಗಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ತಕರಾರು ಸಲ್ಲಿಸಲು ಸಾರ್ವಜನಿಕರಿಗೆ ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದೆ. ಆ ನಂತರ
ಮತ್ತೊಮ್ಮೆ ಕರಡು ಪರಿಶೀಲಿಸಿ ವಾರ್ಡ್‌ಗಳಿಗೆ ಮೀಸಲಾತಿ ಪ್ರಕಟಿಸಲಾಗುತ್ತದೆ’ ಎಂದರು.

ADVERTISEMENT

‘ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಹೊರವಲಯ ದೊಡ್ಡ ಬಿದರಕಲ್ಲು ವಾರ್ಡ್‌ನಲ್ಲಿ ಮೂಲಸೌಕರ್ಯ ಕಲ್ಪಿಸಲು ಸಿದ್ಧತೆಗಳು ನಡೆದಿದೆ. ಇಡೀ ವಾರ್ಡ್‌ಗೆ ಕಾವೇರಿ ನೀರು ಸರಬರಾಜು ಮಾಡಲಾಗುತ್ತದೆ. ನಂತರ, ಡಾಂಬರೀಕರಣ ನಡೆಯ
ಲಿದೆ. ಜಲಮಂಡಳಿ ಕಾಮಗಾರಿ ಮುಗಿದಿರುವ ರಸ್ತೆಗಳಲ್ಲಿ ಡಾಂಬರೀಕರಣ ಆರಂಭವಾಗಿದೆ. ಎರಡು ತಿಂಗಳಲ್ಲಿ ನೀರು ಸರಬರಾಜು ಮತ್ತು ಡಾಂಬರೀಕರಣ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.