ADVERTISEMENT

ನಿಗದಿತ ಅವಧಿಯಲ್ಲೇ ಬಿಬಿಎಂಪಿ ಚುನಾವಣೆ: ಅಶೋಕ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 1:51 IST
Last Updated 9 ಫೆಬ್ರುವರಿ 2020, 1:51 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿಗದಿತ ಅವಧಿಯಲ್ಲೇ ಚುನಾವಣೆ ನಡೆಯಲಿದೆ. ಮೀಸಲಾತಿಯನ್ನು ಕಾನೂನು ಪ್ರಕಾರ ಶೀಘ್ರ ನಿಗದಿಪಡಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

‘ವಾರ್ಡ್‌ ಪುನರ್‌ವಿಂಗಡಣೆ ಕಾರ್ಯ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಕಳುಹಿಸಲಾಗಿದೆ.ಬಿಬಿಎಂಪಿ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಇಲ್ಲಿ 5 ವರ್ಷವೂ ನಮ್ಮದೇ ಆಡಳಿತ ಇರಬೇಕು ಎಂಬುದು ನಮ್ಮ ಆಶಯ. ಅದರಂತೆ ಚುನಾವಣೆ ನಡೆಸಿ, ನಮ್ಮ ಆಡಳಿತವನ್ನು ಪುನರ್‌ ಸ್ಥಾಪಿಸುತ್ತೇವೆ’ ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT