ADVERTISEMENT

ಬಿಬಿಎಂಪಿ ಮೇಯರ್ ಚುನಾವಣೆ: ಕಾಂಗ್ರೆಸ್‌ನಿಂದ ಸತ್ಯನಾರಾಯಣ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 4:59 IST
Last Updated 1 ಅಕ್ಟೋಬರ್ 2019, 4:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಮುಂದುವರಿಸಿವೆ. ಕಾಂಗ್ರೆಸ್‌ನಿಂದದತ್ತಾತ್ರೇಯ ವಾರ್ಡ್‌ನಸದಸ್ಯ ಆರ್‌.ಎಸ್‌.ಸತ್ಯನಾರಾಯಣ ಅವರನ್ನು ಮೇಯರ್‌ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ.

ಜೆಡಿಎಸ್‌ನಿಂದ ಶಕ್ತಿಗಣಪತಿ ನಗರ ವಾರ್ಡ್‌ನ ಗಂಗಮ್ಮ ಅವರನ್ನು ಉಪಮೇಯರ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ.

ಈ ಮಧ್ಯೆ, ಬಿಜೆಪಿಯಲ್ಲಿ ಮೇಯರ್ ಅಭ್ಯರ್ಥಿ ಆಯ್ಕೆ ಗೊಂದಲ ಕೊನೇ ಕ್ಷಣದವರೆಗೂ ಮುಂದುವರಿದಿತ್ತು. ಕೊನೆಗೆ,ಜೋಗುವಾಳ್ಯ ವಾರ್ಡ್‌ನ ಪಾಲಿಕೆ ಸದಸ್ಯ ಎಂ.ಗೌತಮ್ ಕುಮಾರ್‌ ಅವರನ್ನುಮೇಯರ್‌ ಸ್ಥಾನಕ್ಕೆ ಮತ್ತುಹೊಸಹಳ್ಳಿ ವಾರ್ಡ್‌ ಸದಸ್ಯೆ ಮಹಾಲಕ್ಷ್ಮೀ ರವೀಂದ್ರ ಅವರನ್ನುಉಪ ಮೇಯರ್‌ ಅಭ್ಯರ್ಥಿಯನ್ನಾಗಿ ಮಂಗಳವಾರ ಬೆಳಿಗ್ಗೆ ಆಯ್ಕೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.