ADVERTISEMENT

ಬಿಬಿಎಂಪಿ ಮೇಯರ್‌ ಅಭ್ಯರ್ಥಿ ಯಾರೆಂದು ನಾಳೆ ಗೊತ್ತಾಗುತ್ತೆ: ಬಿ.ಎಸ್‌.ಯಡಿಯೂರಪ್ಪ 

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 11:51 IST
Last Updated 30 ಸೆಪ್ಟೆಂಬರ್ 2019, 11:51 IST
   

ಶಿವಮೊಗ್ಗ: ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ಸಂಬಂಧ, ನಾಳೆಯೇ ಚುನಾವಣೆ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

‘ನಮ್ಮ ಅಭ್ಯರ್ಥಿ ಯಾರಾಗಬೇಕೆಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ತೀರ್ಮಾನಿಸುತ್ತಾರೆ. ನಾನು ಅವರು ನಮ್ಮ ಅಭ್ಯರ್ಥಿ ಯಾರಾಗಬೇಕೆಂದು ಮಾತನಾಡಿಕೊಂಡಿದ್ದೇವೆ. ನಮ್ಮ ಅಭ್ಯರ್ಥಿ ಯಾರು ಎಂದು ನಾಳೆ ಹೇಳುತ್ತಾರೆ’ ಎಂದು ತಿಳಿಸಿದರು.

ಇದನ್ನೂ ಓದಿ...ಬಿಬಿಎಂಪಿ ಮೇಯರ್ ಆಯ್ಕೆಗೆ ನಾಳೆಯೇ ಚುನಾವಣೆ

ಸ್ಥಾಯಿ ಸಮಿತಿ ಚುನಾವಣೆ ಹೈಕೋರ್ಟ್ ಮುಂದೂಡಿತ್ತು. ಅದರ ಜೊತೆಗೆ ಈ ಚುನಾವಣೆ ನಡೆಸುವ ಆಪೇಕ್ಷೆ ನಮ್ಮದಾಗಿತ್ತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT