ADVERTISEMENT

ಅನಧಿಕೃತ ಪಟಾಕಿ ಮಳಿಗೆಗೆ ಅವಕಾಶವಿಲ್ಲ

ಬಿಬಿಎಂಪಿ ಆಯುಕ್ತ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 18:49 IST
Last Updated 19 ಅಕ್ಟೋಬರ್ 2019, 18:49 IST

ಬೆಂಗಳೂರು: ‘ಬಿಬಿಎಂಪಿ ನಿಗದಿಪಡಿಸಿದ ಆಟದ ಮೈದಾನಗಳನ್ನು ಬಿಟ್ಟು ಬೇರೆ ಕಡೆಗಳಲ್ಲಿ ಪಟಾಕಿ ಮಳಿಗೆ ನಿರ್ಮಾಣಕ್ಕೆ ಅವಕಾಶ ನೀಡಬಾರದು’ ಎಂದು ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘8 ವಲಯಗಳ ಆಟದ ಮೈದಾನಗಳಲ್ಲಿ ಮಾತ್ರ ಪಟಾಕಿ ಮಳಿಗೆಗಳಿಗೆ ಅನುವು ಮಾಡಿಕೊಡಿ. ಪೊಲೀಸ್ ಇಲಾಖೆ ಪರವಾನಗಿ ನೀಡಿದವರಿಗೆ ಮಾತ್ರ ಮಳಿಗೆ ಸ್ಥಾಪಿಸಲು ಅವಕಾಶ ನೀಡಿ’ ಎಂದು ತಿಳಿಸಿದರು.

‘ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಎಂಟು ವಲಯಗಳಲ್ಲಿ ಗಸ್ತು ತಿರುಗಬೇಕು. ಅನಧಿಕೃತ ಪಟಾಕಿ ಮಳಿಗೆಗಳಿದ್ದರೆ ಕೂಡಲೇ ತರವುಗೊಳಿಸಬೇಕು’ ಎಂದರು.

ADVERTISEMENT

‘ಆಟದ ಮೈದಾನಗಳ ಪ್ರವೇಶ ಹಾಗೂ ನಿರ್ಗಮನ ಸ್ಥಳದಲ್ಲಿ ಪಟಾಕಿ ಮಳಿಗೆಗಳನ್ನು ನಿರ್ಮಿಸಲು ಅವಕಾಶ ನೀಡಬಾರದು. ಅಗ್ನಿಶಾಮಕ ವಾಹನಗಳು ಮೈದಾನದೊಳಗೆ ಹೋಗುವ ವ್ಯವಸ್ಥೆ ಸರಿಯಾಗಿರಬೇಕು. ಅಗ್ನಿ ಅವಘಡ ಸಂಭವಿಸಿದರೆ ಸಾರ್ವಜನಿಕರ ನಿರ್ಗಮನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿರಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.