ಬೆಂಗಳೂರು: ‘ನಗರದ ಪಶ್ಚಿಮ ವಲಯದಲ್ಲಿ 45 ವರ್ಷ ಮೇಲ್ಪಟ್ಟ ಇನ್ನು ಒಂದು ಲಕ್ಷ ಜನರಿಗೆ ಲಸಿಕೆ ನೀಡಿದರೆ ಮೊದಲ ಡೋಸ್ ಲಸಿಕೆ ಅಭಿಯಾನ ಯಶಸ್ವಿಯಾಗಿ ಮುಗಿಯಲಿದೆ’ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ನಗರದಲ್ಲಿ ಶುಕ್ರವಾರ ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಪರಿಹಾರ ಕ್ರಮಗಳ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಈ ವಯೋಮಿತಿಯ ಶೇ 80ರಷ್ಟು ಜನರಿಗೆ ಲಸಿಕೆ ನೀಡಲಾಗಿದ್ದು, ಇನ್ನು 20ರಷ್ಟು ಜನರಿಗೆ, ಅಂದರೆ 1 ಲಕ್ಷ ನಾಗರಿಕರಿಗಷ್ಟೇ ಕೊಡಬೇಕಿದೆ ಎಂದರು.
‘ಹಂಚಿಕೆಯಾದ ಲಸಿಕೆಯನ್ನು ಆಯಾ ದಿನವೇ ನೀಡಬೇಕು. ಒಂದು ವೇಳೆ ಆ ಜಾಗದಲ್ಲಿ ಜನ ಬರದಿದ್ದರೆ ಪಕ್ಕದ ಲಸಿಕಾ ಕೇಂದ್ರಕ್ಕೆ ತೆರಳಿ ಕೊಡಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಕೈಕಟ್ಟಿ ಕೂರುವಂತಿಲ್ಲ’ ಎಂದು ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.