ADVERTISEMENT

ಬಿಬಿಎಂಪಿ ವಾರ್ಡ್‌ ಮರುವಿಂಗಡಣೆ: ಸಿದ್ಧವಾಗುತ್ತಿದೆ ಕರಡು-ಗೌರವ್‌ ಗುಪ್ತ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 20:30 IST
Last Updated 25 ಅಕ್ಟೋಬರ್ 2021, 20:30 IST
ಬಿಬಿಎಂಪಿ
ಬಿಬಿಎಂಪಿ    

ಬೆಂಗಳೂರು: ‘ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಗೆ ಸಂಬಂಧಿಸಿದ ಕರಡು ಸಿದ್ಧಪಡಿಸುತ್ತಿದ್ದೇವೆ. ಈ ಕುರಿತು ಕೆಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸುವಂತೆ ಸರ್ಕಾರವನ್ನು ಕೋರಿದ್ದೇವೆ. ಸರ್ಕಾರದ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದರು.

ಸುದ್ದಿಗಾರರ ಪ್ರಶ್ನೆಗೆ ಸೋಮವಾರ ಉತ್ತರಿಸಿದ ಅವರು, ‘ವಾರ್ಡ್‌ ಮರುವಿಂಗಡಣೆ ಬಗ್ಗೆ ನಾವು ವರದಿ ನೀಡಿದ ಬಳಿಕ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಬಳಿಕ ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ಮಾಹಿತಿ ನೀಡಲಿದೆ. ಬಳಿಕ ಆಯೋಗದ ನಿರ್ದೇಶನದ ಪ್ರಕಾರ ಚುನಾವಣೆ ನಡೆಯಲಿದೆ’ ಎಂದರು.

‘ಶಿಥಿಲಗೊಂಡ ಕಟ್ಟಡಗಳ ಪಟ್ಟಿಯಲ್ಲಿ ಗುರುತಿಸಿರುವ ಎಲ್ಲ ಕಟ್ಟಡಗಳನ್ನು ಕೆಡವಲೇ ಬೇಕೆಂದಿಲ್ಲ. ಆ ಕಟ್ಟಡಗಳಲ್ಲಿ ವಾಸ್ತವ್ಯ ಇರುವವರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡುತ್ತೇವೆ. ಅನಿವಾರ್ಯ ಇದ್ದರೆ ಅಥವಾ ಕಟ್ಟಡ ತೀರಾ ಅಪಾಯಕಾರಿಯಾಗಿದ್ದರೆ ಮಾತ್ರ ಅಂತಹವುಗಳನ್ನು ಕೆಡವಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.