ಬೆಂಗಳೂರು: ‘ಬಿಬಿಎಂಪಿ ವಾರ್ಡ್ಗಳಿಗೆ ಬೆಂಗಳೂರಿನ ಮೂಲ ಗ್ರಾಮಗಳು, ನಾಡಿನ ಸಾಧಕರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ದ್ಯೋತಕಗಳ ಹೆಸರುಗಳನ್ನು ಇಡಬೇಕು’ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆಈ ಬಗ್ಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿಯಲ್ಲಿ ಹೊಸದಾಗಿ ರಚನೆಯಾಗಿರುವ ಹೆಚ್ಚುವರಿ 45 ವಾರ್ಡ್ಗಳು ಸೇರಿದಂತೆ ಒಟ್ಟು 243 ವಾರ್ಡ್ಗಳಿಗೆ ಸ್ಥಳೀಯರ ಹೆಸರುಗಳನ್ನು ಇಡಬೇಕು. ಸಾಹಿತಿಗಳು, ಚಿಂತಕರು, ನಾಡಿನ ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ವ್ಯಕ್ತಿಗಳು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಹಾಗೂ ನದಿಗಳ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.