ADVERTISEMENT

ಸಾಲುಮರದ ತಿಮ್ಮಕ್ಕಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ನೀಡಿದ ಬಿಡಿಎ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 12:36 IST
Last Updated 25 ಜೂನ್ 2022, 12:36 IST
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನ ಪತ್ರ ವಿತರಿಸಿದರು. ಬಿಡಿಎ ಕಾರ್ಯದರ್ಶಿ ಆನಂದ್, ಉಮೇಶ್, ಆಯುಕ್ತ ರಾಜೇಶ್‌ಗೌಡ, ಉಪಕಾರ್ಯದರ್ಶಿ ಮಧು ಇದ್ದರು
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನ ಪತ್ರ ವಿತರಿಸಿದರು. ಬಿಡಿಎ ಕಾರ್ಯದರ್ಶಿ ಆನಂದ್, ಉಮೇಶ್, ಆಯುಕ್ತ ರಾಜೇಶ್‌ಗೌಡ, ಉಪಕಾರ್ಯದರ್ಶಿ ಮಧು ಇದ್ದರು   

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50x80 ಅಳತೆಯ ನಿವೇಶನವನ್ನು ಬಿಡಿಎ ಮಂಜೂರು ಮಾಡಿದ್ದು, ಬುಧವಾರ ನಿವೇಶನ ಪತ್ರಗಳನ್ನು ಹಸ್ತಾಂತರಿಸಲಾಯಿತು.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್‌ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ’ ಎಂದು ವಿಶ್ವನಾಥ್ ಹೇಳಿದರು.

ADVERTISEMENT

‘ಬಿಡಿಎ ನಿವೇಶನ ನೀಡಿರುವುದು ಸಂತಸದ ವಿಷಯ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು’ ಎಂದು ಸಾಲುಮರದ ತಿಮ್ಮಕ್ಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.