
ಅರಮನೆ ಮೈದಾನದಲ್ಲಿ ಕಾರ್ಯಕ್ರಮವೊಂದಕ್ಕೆ ಸಿದ್ಧತೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದಲ್ಲಿರುವ ಬ್ಯಾರಿ ಸಮುದಾಯದವರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಬ್ಯಾರಿಸ್ ಸೆಂಟ್ರಲ್ ಕಮಿಟಿ ಫೆ.1ರಂದು ಬೆಳಿಗ್ಗೆ 10 ಗಂಟೆಗೆ ಅರಮನೆ ಮೈದಾನದ ಶೃಂಗಾರ್ ಪ್ಯಾಲೇಸ್ನಲ್ಲಿ ‘ಬ್ಯಾರಿ ಕೂಟ’ ಹಮ್ಮಿಕೊಂಡಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಶಬೀರ್ ಬ್ರಿಗೇಡ್, ‘ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಒಟ್ಟು ₹ 10 ಲಕ್ಷ ವಿದ್ಯಾರ್ಥಿವೇತನವನ್ನು ಕಾರ್ಯಕ್ರಮದಲ್ಲಿ ವಿತರಿಸಲಾಗುತ್ತದೆ. ಆಂಬುಲೆನ್ಸ್ಗೆ ಕೂಡ ಚಾಲನೆ ನೀಡಲಾಗುತ್ತದೆ. ಸಮುದಾಯದ ಮಕ್ಕಳು, ಮಹಿಳೆಯರು ಹಾಗೂ ಯುವಜನರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.
‘ಬ್ಯಾರಿ ಕವಿಗೋಷ್ಠಿ, ಬ್ಯಾರಿ ಸಂಸ್ಕೃತಿ ಪ್ರತಿಬಿಂಬಿಸುವ ‘ಒಪ್ಪನೆ ಪಾಟ್’, ಬ್ಯಾರಿ ಕಲೆ ಬಿಂಬಿಸುವ ಎಕ್ಸ್ಪೋ, ಕರಾವಳಿಯ ತಿಂಡಿ–ತಿನಿಸುಗಳ ಆಹಾರ ಮೇಳ, ಉದ್ಯಮ ಸಮಾವೇಶ ಸೇರಿದಂತೆ ಸಮುದಾಯದವರಿಗೆ ವಿವಿಧ ಚಟುವಟಿಕೆಗಳು ಇರಲಿವೆ’ ಎಂದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ಉಪಾಧ್ಯಕ್ಷ ಗಫೂರ್, ಕೋಶಾಧಿಕಾರಿ ರಿಫಾಯಿ, ಸಂಘಟನಾ ಕಾರ್ಯದರ್ಶಿ ಅಥಾವುಲ್ಲ ಪೂಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.