ADVERTISEMENT

ತಾಯಿ– ಮಗುವಿನ ಹತ್ಯೆ: ವ್ಯಾಪಾರದ ಸೋಗಿನ ಶಂಕೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 17:16 IST
Last Updated 7 ಅಕ್ಟೋಬರ್ 2021, 17:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಬೇಗೂರು ಠಾಣೆ ವ್ಯಾಪ್ತಿಯ ಚೌಡೇಶ್ವರಿ ಬಡಾವಣೆಯಲ್ಲಿ ಚಂದ್ರಕಲಾ (40) ಹಾಗೂ ಅವರ ಮಗು ರಾತನ್ಯ (4) ಹತ್ಯೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

‘ಮುಖಕ್ಕೆ ಮಾಸ್ಕ್ ಹಾಗೂ ಬೆನ್ನಿಗೆ ಬ್ಯಾಗ್ ಹಾಕಿಕೊಂಡು ಮನೆಗೆ ನುಗ್ಗಿದ್ದ ಆರೋಪಿ, ತಾಯಿ ಹಾಗೂ ಮಗುವನ್ನು ಕೊಂದು ಪರಾರಿಯಾಗಿದ್ದಾನೆ. ಆತ ಯಾರು ಎಂಬುದನ್ನು ಪತ್ತೆ ಮಾಡಲು ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮೃತ ಚಂದ್ರಕಲಾ, ಆಯುರ್ವೇದ ಔಷಧಿಯ ಆನ್‌ಲೈನ್‌ ಮಾರಾಟದ ವ್ಯಾಪಾರ ಮಾಡುತ್ತಿದ್ದರು. ಈ ಸಂಬಂಧ ಹಲವರನ್ನು ಸಂಪರ್ಕಿಸುತ್ತಿದ್ದರು. ವ್ಯಾಪಾರ ಸೋಗಿನಲ್ಲೇ ಆರೋಪಿ ಮನೆಗೆ ಬಂದು ಕೃತ್ಯ ಎಸಗಿರುವ ಮಾಹಿತಿಯೂ ಇದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.