ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ಅಸಿಸ್ಟೆಂಟ್ ಕಮಿಷನರ್ ಅವರಿಂದ ಧ್ವಜಾರೋಹಣ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.
ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅವರು, ಈ ಮೈದಾನದ ಜಾಗ ಮೂಲತಃ ಕಂದಾಯ ಇಲಾಖೆಗೆ ಸೇರಿದೆ. ಯಾರಿಗೂ ಹಸ್ತಾಂತರ ಮಾಡಿಲ್ಲ ಎಂದರು.
ಆಗಸ್ಟ್ 15ರಂದು ಧ್ವಜಾರೋಹಣ ಕಾರ್ಯಕ್ರಮದಂದು ಸ್ಥಳೀಯ ಶಾಸಕ ಮತ್ತು ಸಂಸದರನ್ನ ಆಹ್ವಾನಿಸಲಾಗುವುದು. ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.