ADVERTISEMENT

ಬಸ್ – ಬೈಕ್ ಅಪಘಾತ: ರಿಯಲ್ ಎಸ್ಟೇಟ್‌ ಏಜೆಂಟ್ ಸಾವು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 14:53 IST
Last Updated 31 ಆಗಸ್ಟ್ 2025, 14:53 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ತುಮಕೂರು ರಸ್ತೆಯ ಎಂಇಐ ಜಂಕ್ಷನ್‍ನಲ್ಲಿ ಶನಿವಾರ ರಾತ್ರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಏಜೆಂಟ್ ಮೃತಪಟ್ಟಿದ್ದಾರೆ.

ADVERTISEMENT

ಟಿ.ದಾಸರಹಳ್ಳಿ ನಿವಾಸಿಯಾದ ಸುರೇಶ್ (40) ಮೃತ ವ್ಯಕ್ತಿ. ವೈಯಕ್ತಿಕ ಕೆಲಸದ ನಿಮಿತ್ತ ಮಲ್ಲೇಶ್ವರಕ್ಕೆ ಬಂದಿದ್ದ ಅವರು ಬೈಕ್‍ನಲ್ಲಿ ರಾತ್ರಿ ಮನೆಗೆ ವಾಪಸ್ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಾವೆಲ್ಸ್ ಬಸ್, ಸುರೇಶ್‌ ಅವರ ಬೈಕ್‍ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಅವರ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನನ್ನು ಬಂಧಿಸಿ, ವಾಹನ ಜಪ್ತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.