ADVERTISEMENT

ರವಿಚಂದ್ರನ್‌ ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 20:46 IST
Last Updated 9 ಏಪ್ರಿಲ್ 2022, 20:46 IST
ಡಾ. ಸತ್ಯನಾರಾಯಣ
ಡಾ. ಸತ್ಯನಾರಾಯಣ   

ಬೆಂಗಳೂರು: ನಟ ಮತ್ತು ನಿರ್ದೇಶಕ ವಿ. ರವಿಚಂದ್ರನ್‌ ಸೇರಿದಂತೆ ಮೂವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪ್ರಕಟಿಸಿದೆ.

‘ಕನ್ನಡ ಚಿತ್ರೋದ್ಯಮಕ್ಕೆ ನೀಡಿರುವ ಕೊಡುಗೆಗಾಗಿ ವಿ. ರವಿಚಂದ್ರನ್‌ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿನ ಅನುಪಮ ಸೇವೆಗಾಗಿ ಎಂ.ಆರ್‌. ಜೈಶಂಕರ್‌ ಅವರಿಗೆ ಡಿ.ಲಿಟ್‌. ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿನ ಅತ್ಯುತ್ತಮ ಸೇವೆಗಾಗಿ ಡಾ. ಸತ್ಯನಾರಾಯಣ ಅವರಿಗೆ ಡಿ.ಎಸ್ಸಿ. ಪದವಿ ನೀಡಲಾಗುವುದು’ ಎಂದು ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಈ ಮೂವರಿಗೆ ಪದವಿ ಪ್ರದಾನ ಮಾಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.