ADVERTISEMENT

ವಿಪತ್ತು ನಿರ್ವಹಣಾ ಕಾಯ್ದೆಯಡಿ 16 ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 21:47 IST
Last Updated 25 ಏಪ್ರಿಲ್ 2021, 21:47 IST

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಜಾರಿ ವೇಳೆ ನಿಯಮ ಉಲ್ಲಂಘಿಸಿದ್ದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ 16 ಎಫ್‌ಐಆರ್ ದಾಖಲಾಗಿವೆ.

‘ಕರ್ಫ್ಯೂ ಜಾರಿ ಸಂದರ್ಭದಲ್ಲೇ ಕೆಲವರು ನಿಯಮ ಉಲ್ಲಂಘಿಸಿದ್ದಾರೆ. ಅಂಥವರ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 16 ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

886 ವಾಹನ ಜಪ್ತಿ: ಶನಿವಾರವಷ್ಟೇ ನಿಯಮ ಉಲ್ಲಂಘಿಸಿದ್ದಕ್ಕಾಗಿ 1,149 ವಾಹನಗಳನ್ನು ಜಪ್ತಿ ಮಾಡಿದ್ದ ಪೊಲೀಸರು, ಭಾನುವಾರವೂ 886 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ADVERTISEMENT

‘ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದವರನ್ನು ತಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.