ಬೆಂಗಳೂರು: ಸ್ಫೋಟವೊಂದು ಸಂಭವಿಸಿದ್ದು, ಬಾಲಕ ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಂಜಯ್ ಗಾಂಧಿಆಸ್ಪತ್ರೆಗೆ ಸೇರಿಸಲಾಗಿದೆ.
ಎಂಟು ವರ್ಷದ ಮುಬಾರಕ್ ಮೃತ ಬಾಲಕ.
ತಿಮ್ಮರಾಜು ಅವರ ಮನೆಯಲ್ಲಿ ಸ್ಫೋಟ ಶಂಕೆ, ಕಸ್ತೂರಿ, ನರಸಮ್ಮ, ಸಬ್ರಿನ್ ಬಾನು, ಫಾತಿಮಾ ಸೇರಿದಂತೆ ಹತ್ತು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಫೋಟದ ತೀವ್ರತೆಗೆ ಮೂರು ಮನೆಯ ಗೋಡೆಗೆ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಿಲಿಂಡರ್ನಿಂದ ಅನಿಲ ಸೋರಿಕೆಯಿಂದ ಆಗಿರುವ ಅವಘಡವೇ ಅಥವಾ ಬೇರೆ ಕಾರಣವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸ್ಥಳದಲ್ಲಿ ಯಾವುದಾದರೂ ಸ್ಫೋಟಕವಿತ್ತೇ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಸ್ಥಳಕ್ಕೆ ಹೆಚ್ಚುವರಿ ಕಮಿಷನರ್ ರಮೇಶ್ ಬಾನೋತ್ ಭೇಟಿ, ಪರಿಶೀಲನೆ ನಡೆಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.