ADVERTISEMENT

ಬೆಂಗಳೂರಿನಲ್ಲಿ ಮಾರಕಾಸ್ತ್ರ ಹಿಡಿದು ಗಲಾಟೆ: ಆರು ಮಂದಿ ಸೆರೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 15:27 IST
Last Updated 30 ಡಿಸೆಂಬರ್ 2025, 15:27 IST
   

ಬೆಂಗಳೂರು: ಮಾರಕಾಸ್ತ್ರ ಹಿಡಿದು ದಾಂದಲೆ ನಡೆಸಿದ್ದ ಆರು ಮಂದಿಯನ್ನು ಸಿ.ಕೆ. ಅಚ್ಚುಕಟ್ಟು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಜ್ಞಾ ಲೇಔಟ್‌ನ ವೆಂಕಟೇಶ್ ಅಲಿಯಾಸ್ ಕಾಡು, ಕತ್ರಿಗುಪ್ಪೆಯ ನಿವಾಸಿ ಗಿರೀಶ್ ಅಲಿಯಾಸ್ ಚೋಟ, ಬ್ಯಾಟರಾಯನಪುರದ ಸುರೇಂದ್ರ ಅಲಿಯಾಸ್ ಸುರಿ, ಚಂದನ್‌ ಅಲಿಯಾಸ್ ಸಣ್ಣ, ಶ್ರೀನಿವಾಸನಗರದ ಕೆ.ಎಸ್‌.ಗಣೇಶ್, ಜ್ಞಾನಭಾರತಿಯ ಗಣೇಶ ಬಂಧಿತರು.

ಕತ್ರಿಗುಪ್ಪೆ ಮುಖ್ಯರಸ್ತೆಯಲ್ಲಿ ಗಲಾಟೆ ನಡೆದಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ADVERTISEMENT

ರಸ್ತೆಯಲ್ಲಿ ಸಾಗುತ್ತಿದ್ದ ಇಬ್ಬರ ಮೇಲೆ ಆರು ಮಂದಿ ಆರೋಪಿಗಳು ಮಾರಕಾಸ್ತ್ರ ಬೀಸಿದ್ದರು. ಅಲ್ಲದೇ ರಸ್ತೆಯ ಪಕ್ಕದಲ್ಲಿದ್ದ ಬೇಕರಿಯ ಗಾಜು ಒಡೆದು ಹಾಕಿ ದಾಂದಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.