ADVERTISEMENT

ಬೆಂಗಳೂರು: ನಾಳೆ ಇಪಿಎಸ್ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 14:00 IST
Last Updated 28 ಸೆಪ್ಟೆಂಬರ್ 2025, 14:00 IST
ಬಿಎಂಟಿಸಿ ಬಸ್‌
ಬಿಎಂಟಿಸಿ ಬಸ್‌   

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಪಿಎಸ್‌–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಸೆಪ್ಟೆಂಬರ್ 29ರಂದು ಭವಿಷ್ಯ ನಿಧಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ.

ಕನಿಷ್ಠ ₹7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡುವಂತೆ ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಲ್ಲ. .

2014ರಿಂದ ಇಪಿಎಸ್ ನಿವೃತ್ತರಿಗೆ ₹1000 ನೀಡಲಾಗುತ್ತಿದೆ. ಇನ್ನೂ ಕೆಲವರು ಒಂದು ಸಾವಿರ ರೂಪಾಯಿಗಿಂತ ಕಡಿಮೆ ಪಿಂಚಣಿ ಪಡೆಯುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ನಂಜುಂಡೇಗೌಡ ಬೇಸರ ವ್ಯಕ್ತಪಡಿಸಿದರು.

ADVERTISEMENT

ನ್ಯಾಯಾಲಯದ ಇತ್ತೀಚಿನ ತೀರ್ಪಿನ ಪ್ರಕಾರ ಜಂಟಿ ಆಯ್ಕೆ ಪತ್ರ ಸಲ್ಲಿಸಿದ ಎಲ್ಲಾ ನಿವೃತ್ತರಿಗೂ ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು. ನಗರದಲ್ಲಿ 238ನೇ ಸಿಬಿಟಿ ಸಭೆ ಅಕ್ಟೋಬರ್ 11 ಮತ್ತು 12ರಂದು ನಡೆಯುತ್ತಿದ್ದು, ಈ ಸಭೆಯಲ್ಲಿ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಕ್ಟೋಬರ್ 5ರಂದು ಲಾಲ್‌ಬಾಗ್ ಆವರಣದಲ್ಲಿ ನಿವೃತ್ತ ನೌಕರರ ಮಾಸಿಕ ಸಭೆ ಚಿಂತನ ಮಂಥನ ನಡೆಯಲಿದೆ. 9ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.