ADVERTISEMENT

ಕೆ.ಆರ್.ಪುರ: ರಸ್ತೆ ಗುಂಡಿ ಮುಚ್ಚಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2022, 21:31 IST
Last Updated 23 ಅಕ್ಟೋಬರ್ 2022, 21:31 IST
ಆಮ್ ಆದ್ಮಿ ಪಕ್ಷದ ಮುಖಂಡ ದಿಲೀಪ್ ಕುಮಾರ್ ರಸ್ತೆ ಮಧ್ಯೆ ಗುಂಡಿ ಪಕ್ಕದಲ್ಲಿ ಕುಳಿತು ವಿನೂತನವಾಗಿ ಪ್ರತಿಭಟಿಸಿದರು
ಆಮ್ ಆದ್ಮಿ ಪಕ್ಷದ ಮುಖಂಡ ದಿಲೀಪ್ ಕುಮಾರ್ ರಸ್ತೆ ಮಧ್ಯೆ ಗುಂಡಿ ಪಕ್ಕದಲ್ಲಿ ಕುಳಿತು ವಿನೂತನವಾಗಿ ಪ್ರತಿಭಟಿಸಿದರು   

ಕೆ.ಆರ್.ಪುರ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸವಾರರಿಗೆ ಮೃತ್ಯುಕೂಪವಾಗಿರುವ ರಸ್ತೆಯ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಯಿತು.

ಪದೇ ಪದೇ ಅಪಘಾತಗಳು ನಡೆದರೂ ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇನ್ನೆಷ್ಟು ಜೀವ ಬಲಿಯಾಗಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ದಿಲೀಪ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್.ಪುರ ಬಿಬಿಎಂಪಿ ಬಳಿಯ ರಾಷ್ಟ್ರೀಯ ಹೆದ್ದಾರಿಯಿಂದ ಭಟ್ಟರಹಳ್ಳಿ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದು ಸಂಪೂರ್ಣ ಹದಗೆಟ್ಟಿದೆ. ರಾಷ್ಟ್ರೀಯ ಹೆದ್ದಾರಿಯು ನಗರದಿಂದ ತಮಿಳುನಾಡು, ಆಂಧ್ರಪ್ರದೇಶ, ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಾಗಿದೆ. ದಿನಕ್ಕೆ ಎರಡು ಲಕ್ಷಕ್ಕೂ ಅಧಿಕ ವಾಹನಗಳು ಈ ರಸ್ತೆಯ ಮೂಲಕ ಸಂಚಾರ ನಡೆಸುತ್ತವೆ. ಇಂತಹ ಗುಂಡಿಗಳು ಬಿದ್ದಿದ್ದು, ಗುಂಡಿಗಳು ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸಿ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.
ಇಷ್ಟಾದರೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.