ADVERTISEMENT

ಬೆಂಗಳೂರು: ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 10:40 IST
Last Updated 4 ಅಕ್ಟೋಬರ್ 2025, 10:40 IST
<div class="paragraphs"><p>ನಮ್ಮ ಮೆಟ್ರೊ&nbsp;</p></div>

ನಮ್ಮ ಮೆಟ್ರೊ 

   

ಬೆಂಗಳೂರು: ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಮೆಟ್ರೊ ರೈಲು ಬರುವ ವೇಳೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹಸಿರು ಮಾರ್ಗದಲ್ಲಿ ಮಧ್ಯಾಹ್ನ 3.19ಕ್ಕೆ ಮಾದಾವರದಿಂದ ರೇಷ್ಮೆ ಸಂಸ್ಥೆಯ ಕಡೆಗೆ ರೈಲು ಸಾಗುತ್ತಿದ್ದ ವೇಳೆ 3ನೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಪ್ರಯಾಣಿಕರೊಬ್ಬರು ಹಾರಿದ್ದಾರೆ. ಸ್ಟೇಷನ್‌ ಕಂಟ್ರೋಲರ್‌ಗಳಾದ ಗಣೇಶ, ವೆಂಕಟೇಶ್‌ ಮತ್ತು ಸಿಬ್ಬಂದಿ ಕೂಡಲೇ ವಿದ್ಯುತ್‌ ಸರಬರಾಜು ಸ್ಥಗಿತಗೊಳಿಸಿದ್ದಾರೆ.

ADVERTISEMENT

ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಪ್ರಯಾಣಿಕರ ಸಹಾಯದಿಂದ ಹೊರತೆಗೆದು ಆಂಬುಲೆನ್ಸ್‌ ಮೂಲಕ  ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.