
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ರಾಜಾಜಿನಗರ ವಿಭಾಗದ ವಿಜಯನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ 7ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ, ತಿಮ್ಮೇನಹಳ್ಳಿ, ಎಂ.ಸಿ. ಲೇಔಟ್, ಮಾರೇನಹಳ್ಳಿ ಲೇಔಟ್, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಕೆಸಿಜಿ ಕೈಗಾರಿಕಾ ಪ್ರದೇಶ, ನಂಜಪ್ಪ ಕೈಗಾರಿಕಾ ಎಸ್ಟೇಟ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.