ADVERTISEMENT

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2019, 2:16 IST
Last Updated 12 ಆಗಸ್ಟ್ 2019, 2:16 IST
ಮಳೆ ಸುರಿಯುತ್ತಿದ್ದ ವೇಳೆಯಲ್ಲೇ ಕೊಡೆ ಹಿಡಿದು ಬೈಕ್‌ನಲ್ಲಿ ಸಂಚರಿಸಿದ ಸವಾರರು
ಮಳೆ ಸುರಿಯುತ್ತಿದ್ದ ವೇಳೆಯಲ್ಲೇ ಕೊಡೆ ಹಿಡಿದು ಬೈಕ್‌ನಲ್ಲಿ ಸಂಚರಿಸಿದ ಸವಾರರು   

ಬೆಂಗಳೂರು: ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಭಾನುವಾರ ಸಂಜೆ ಸಾಧಾರಣ ಮಳೆ ಸುರಿಯಿತು.

ಬೆಳಿಗ್ಗೆಯಿಂದಲೇ ನಗರದಲ್ಲಿ ತಂಪಿನ ವಾತಾವರಣವಿತ್ತು. ಕೆಲ ವೇಳೆಬಿಸಿಲು ಕಾಣಿಸಿಕೊಂಡು ನಂತರ ಮಾಯವಾಯಿತು. ಸಂಜೆ ವೇಳೆಯಲ್ಲಿ ಜಿಟಿ ಜಿಟಿಯಾಗಿ ಆರಂಭವಾದ ಮಳೆ, 15 ನಿಮಿಷಗಳವರೆಗೆ ಸುರಿಯಿತು.

ಯಶವಂತಪುರ, ಪೀಣ್ಯ, ಮಲ್ಲೇಶ್ವರ, ರಾಜಾಜಿನಗರ, ವಿಜಯನಗರ, ಮೈಸೂರು ರಸ್ತೆಯ ನಾಯಂಡಹಳ್ಳಿ, ದೀಪಾಂಜಲಿನಗರ, ಗಿರಿನಗರ, ಹನುಮಂತನಗರ, ಬಸವನಗುಡಿ, ಜಯನಗರ, ಹೆಬ್ಬಾಳ ಹಾಗೂ ಸುತ್ತಮುತ್ತ ಮಳೆ ಆಯಿತು.

ADVERTISEMENT

ಭಾನುವಾರ ಸರ್ಕಾರಿ ರಜೆ ಇದ್ದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಶಾಪಿಂಗ್‌ಗೆಂದು ಮನೆಯಿಂದ ಹೊರಗೆ ಬಂದಿದ್ದರು. ಬಹುತೇಕರು, ಮಳೆಯಲ್ಲಿ ಸಿಲುಕಿಕೊಂಡರು. ಕೆಲವರು, ರಸ್ತೆಯ ಅಕ್ಕ–ಪಕ್ಕದ ಮಳಿಗೆ ಹಾಗೂ ತಂಗುದಾಣಗಳಲ್ಲಿ ಆಶ್ರಯ ಪಡೆದಿದ್ದ ದೃಶ್ಯಗಳು ಕಂಡುಬಂದವು.

ಚಾಲುಕ್ಯ ವೃತ್ತ, ಮಡಿವಾಳ, ಮೆಜೆಸ್ಟಿಕ್, ಓಕಳಿಪುರ ಹಾಗೂ ಸುತ್ತಮುತ್ತ ವಾಹನಗಳ ಓಡಾಟ ನಿಧಾನಗತಿಯಲ್ಲಿತ್ತು. ಕೆಲವೆಡೆ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾಯಿಸಿಕೊಂಡು ಹೋದರು.

‘ನಗರದಲ್ಲಿ ಭಾನುವಾರ ಸಂಜೆ ಸಾಧಾರಣ ಮಳೆಯಾಗಿದೆ. ಹಾನಿ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.