ಬೆಂಗಳೂರು: ನಗರದಲ್ಲಿ ಬಿಡುವು ಕೊಡುತ್ತಲೇ ಮಳೆ ಆಗುತ್ತಿದ್ದು, ಗುರುವಾರ ರಾತ್ರಿ ಗುಡುಗು–ಸಿಡಿಲು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಪ್ರದೇಶಗಳಲ್ಲಿ ಬಿಸಿಲಿನ ತಾಪ ಇತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂತು. ಸಂಜೆ ತುಂತುರು ಮಳೆ ಆರಂಭವಾಗಿ, ನಂತರ ಜೋರಾಯಿತು.
ರಾಜಾಜಿನಗರ, ವಿಜಯನಗರ, ದೀಪಾಂಜಲಿನಗರ, ಚಂದ್ರಾಲೇಔಟ್, ನಾಗರಬಾವಿ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ಶೇಷಾದ್ರಿಪುರ, ಆರ್.ಟಿ.ನಗರ, ಗಾಂಧಿ ನಗರ, ಮೆಜೆಸ್ಟಿಕ್, ಶಾಂತಿನಗರ, ಲಾಲ್ಬಾಗ್, ವಿಲ್ಸನ್ ಗಾರ್ಡನ್, ಕೋರಮಂಗಲ, ಎಚ್ಎಸ್ಆರ್ ಲೇಔಟ್ ಹಾಗೂ ಸುತ್ತಮುತ್ತ ಮಳೆ ಇತ್ತು. ಶಿವಾಜಿನಗರ, ಅಶೋಕನಗರ, ಎಂ.ಜಿ. ರಸ್ತೆ, ಹಲಸೂರು, ಇಂದಿರಾ ನಗರ, ದೊಮ್ಮಲೂರು, ಹೆಣ್ಣೂರು, ಬಾಣಸವಾಡಿ ಹಾಗೂ ಇತರೆ ಪ್ರದೇಶ ಗಳಲ್ಲೂ ಮಳೆ ಆಯಿತು.
‘ಮಳೆಗಾಲ ಆರಂಭವಾಗಿದ್ದು, ಬಿಡುವು ಕೊಡುತ್ತಲೇ ನಗರದಲ್ಲಿ ಉತ್ತಮ ಮಳೆ ಆಗುತ್ತಿದೆ. ರಸ್ತೆ ಯಲ್ಲಿ ನೀರು ನಿಂತ ದೂರುಗಳು ಹೊರತುಪಡಿಸಿ, ಬೇರೆ ಯಾವ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.