ಬೆಂಗಳೂರು: ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಂಟ್ ಮೇರಿ ಬೆಸಿಲಿಕಾ ಚರ್ಚ್ನ ರಥೋತ್ಸವದ ಪ್ರಯುಕ್ತ ಸೆಪ್ಟೆಂಬರ್ 8 ರಂದು ಮಧ್ಯಾಹ್ನ 1 ರಿಂದ ರಾತ್ರಿ 10ರವರೆಗೆ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
ಸಂಚಾರ ನಿರ್ಬಂಧ:
ಜ್ಯೋತಿ ಕೆಫೆ ವೃತ್ತದಿಂದ ರಸೆಲ್ ಮಾರ್ಕೆಟ್ವರೆಗೆ ರಸ್ತೆಯ ಎರಡೂ ಬದಿ, ಬ್ರಾಡ್ ವೇ ರಸ್ತೆಯಲ್ಲಿ ರಸೆಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡೂ ಬದಿ, ಧರ್ಮರಾಜ ಕೋಯಿಲ್ ಸ್ಟ್ರೀಟ್–ಓ.ಪಿ.ಎಚ್.ರಸ್ತೆ ವರೆಗೆ ರಸೆಲ್ ಮಾರ್ಕೆಟ್ ಕಡೆಗೆ ಬರುವ ವಾಹನಗಳು, ಬಿ.ಆರ್.ವಿ. ಜಂಕ್ಷನ್ ನಿಂದ ಶಿವಾಜಿ ನಗರ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ಗಳು ಮತ್ತು ಬಾಳೇಕುಂದ್ರಿ ವೃತ್ತದಿಂದ ಶಿವಾಜಿ ನಗರ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ಗಳು ಸೇರಿ ಎಲ್ಲಾ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ:
ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿಎಂಟಿಸಿ ಬಸ್ಗಳು ಬಿ.ಆರ್.ವಿ. ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಸಿಟಿಓ–ಕ್ವೀನ್ಸ್ ಸರ್ಕಲ್–ಎಂ.ಜಿ. ರಸ್ತೆ ಮೂಲಕ ಸಂಚರಿಸಬಹುದು.
ದ್ವಿ ಚಕ್ರ ಹಾಗೂ ಲಘು ಮೋಟಾರು ವಾಹನಗಳು ಬಿಆರ್ವಿ ಸೆಂಟ್ರಲ್ ಸ್ಟ್ರೀಟ್ ಬಳಿ ಬಲ ತಿರುವು ಪಡೆದು ಸಫೀನಾ ಪ್ಲಾಜಾ–ಕಮರ್ಷಿಯಲ್ ಸ್ಟ್ರೀಟ್, ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.