ಬೆಂಗಳೂರು: ‘ಕೋವಿಡ್ ಲಸಿಕೆ ಮಾರುಕಟ್ಟೆಗೆ ಬಂದಾಗ ಅದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುವ ಸಾಧ್ಯತೆಗಳಿವೆ. ಇದಕ್ಕೆ ಸರ್ಕಾರ ಅವಕಾಶ ನೀಡಬಾರದು’ ಎಂದು ಈಶ ಪ್ರತಿಷ್ಠಾನದ ಸಂಸ್ಥಾಪಕ ಜಗ್ಗಿ ವಾಸುದೇವ್ ಶನಿವಾರ ಸಲಹೆ ನೀಡಿದರು.
ನಗರದಲ್ಲಿ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ (ಬಿಟಿಎಸ್), ‘ಸಮಾಜದ ಸ್ವಾಸ್ಥ್ಯಕ್ಕಾಗಿ ತಂತ್ರಜ್ಞಾನಗಳಲ್ಲಿ ಹೂಡಿಕೆ’ ಕುರಿತ ಗೋಷ್ಠಿಯಲ್ಲಿ ಅವರು, ‘ಲಸಿಕೆಯ ಸಾಧಕ-ಬಾಧಕಗಳ ಬಗ್ಗೆ ವಿಜ್ಞಾನ ಲೋಕ ಖಾತ್ರಿಪಡಿಸಿಕೊಳ್ಳಬೇಕು. ಜತೆಗೆ ವಿಶ್ವ ಆರೋಗ್ಯ ಸಂಸ್ಥೆಯೂ ಯಾವ ಲಸಿಕೆ ಕಡ್ಡಾಯ, ಯಾವುದು ಐಚ್ಛಿಕ ಎಂದು ಸ್ಪಷ್ಟಪಡಿಸಬೇಕು’ ಎಂದರು.
‘ಯಾರು ಎಲ್ಲಿಂದ ಬೇಕಾದರೂ ಕೆಲಸ ಮಾಡಬಹುದು ಎಂಬುದನ್ನು ಕೋವಿಡ್ ಸನ್ನಿವೇಶ ದೃಢಪಡಿಸಿದೆ. ಇದನ್ನು ಅರ್ಥಮಾಡಿಕೊಂಡರೆ ಕಂಪನಿಗಳು ಮೂಲಸೌಕರ್ಯಕ್ಕಾಗಿ ಮಾಡುವ ಅನಗತ್ಯ ವೆಚ್ಚಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಜೊತೆಗೆ ತಮ್ಮ ನಿರ್ವಹಣಾ ಹೊರೆಯನ್ನೂ ಕಡಿಮೆ ಮಾಡಿಕೊಳ್ಳಬಹುದು’ ಎಂದರು.
‘ಕಂಪನಿಗಳು ಮನುಷ್ಯರನ್ನು ಸಂಪನ್ಮೂಲ ಎಂದು ನೋಡುವ ಧೋರಣೆ ಬದಲಾಗಬೇಕು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.