ದಂಡ (ಸಾಂದರ್ಭಿಕ ಚಿತ್ರ)
– ಐಸ್ಟಾಕ್ ಚಿತ್ರ
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಇದುವರೆಗೆ ಒಟ್ಟು 19,36,556 ಪ್ರಕರಣಗಳು ಇತ್ಯರ್ಥಗೊಂಡಿವೆ. ₹54.30 ಕೋಟಿ ದಂಡ ಸಂಗ್ರಹವಾಗಿದೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರ ಇ–ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರವು ಆದೇಶಿಸಿತ್ತು. ಈ ಆದೇಶವು ಆ.23ರಿಂದ ಜಾರಿಗೆ ಬಂದಿದ್ದು, ಸೆ.12ರವರೆಗೆ ರಿಯಾಯಿತಿ ಅಡಿ ದಂಡ ಪಾವತಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ಮಾಲೀಕರು ದಂಡ ಪಾವತಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.