ADVERTISEMENT

ನೇರವಾಗಿ ಕುಲಪತಿ ಭೇಟಿಯಾಗಬೇಡಿ: ವಿದ್ಯಾರ್ಥಿಗಳಿಗೆ ಬೆಂಗಳೂರು ವಿವಿ ಸೂಚನೆ

ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2022, 21:28 IST
Last Updated 16 ಅಕ್ಟೋಬರ್ 2022, 21:28 IST
   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾ ಲಯದ ಸ್ನಾತಕ, ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಕುಲಪತಿ ಮತ್ತು ಕುಲಸಚಿವರನ್ನು ನೇರ ವಾಗಿ ಭೇಟಿ ಮಾಡಲು ಬರುತ್ತಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ತಮ್ಮ ಅಹವಾಲುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮೊದಲು ಸಂಬಂಧಪಟ್ಟ ಅಧಿಕಾರಿ ಗಳನ್ನು ಭೇಟಿಯಾಗಬೇಕು ಎಂದು ಸೂಚಿಸಲಾಗಿದೆ.

ವಿಭಾಗಮಟ್ಟದಲ್ಲಿ ಆಯಾ ವಿಭಾಗದ ಅಧ್ಯಕ್ಷರು, ವಿದ್ಯಾರ್ಥಿ ನಿಲಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕ್ಷೇಮಪಾಲಕರು ಅಥವಾ ನಿರ್ದೇಶಕರನ್ನು ಸಂಪರ್ಕಿಸಬೇಕು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದವರೊಂದಿಗೆ ಹಾಗೂ ಶಿಷ್ಯವೇತನ ಮತ್ತು ಇತರೆ ಸೌಲಭ್ಯಗಳ ಬಗ್ಗೆ ವಿಶೇಷಾಧಿಕಾರಿ ಗಳು, ಪರಿಶಿಷ್ಟ ಜಾತಿ, ಪಂಗಡ ಘಟಕ ಮತ್ತು ಹಿಂದುಳಿ ವರ್ಗದ ಕೋಶ ಇವರ ಮೂಲಕ ಮಾತ್ರವೇ ಪೂರ್ವಾನುಮತಿ ಪಡೆದುಕೊಂಡು ಕಚೇರಿಯ ಸಮಯ ದಲ್ಲಿ ಕುಲಪತಿ ಅಥವಾ ಕುಲಸಚಿವರನ್ನು ಭೇಟಿಯಾಗುವಂತೆ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.