ADVERTISEMENT

ಬೆಂಗಳೂರು ವಿ.ವಿ: ಸಾಮೂಹಿಕ ರಾಜೀನಾಮೆಗೆ ಸಿಂಡಿಕೇಟ್‌ ಸದಸ್ಯರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 9:07 IST
Last Updated 11 ಏಪ್ರಿಲ್ 2022, 9:07 IST
ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ರಾಜ್ಯ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

‘ರಾಜ್ಯ ಸರ್ಕಾರ ಇತ್ತೀಚೆಗೆ ಇಬ್ಬರ ಸಿಂಡಿಕೇಟ್‌ ಸದಸ್ಯತ್ವ ರದ್ದುಪಡಿಸಿರುವ ಕ್ರಮವನ್ನು ಖಂಡಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಸಲ್ಲಿಸಲಾಗುವುದು’ ಎಂದು ಸದಸ್ಯರಾದ ಟಿ.ವಿ. ರಾಜು ಮತ್ತು ಗೋಪಿನಾಥ್‌ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರೇಮ್‌ ಸೋಹನ್‌ಲಾಲ್‌ ಮತ್ತು ಗೋವಿಂದರಾಜು ಅವರ ನಾಮನಿರ್ದೇಶನವನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ, ಇವರ ಸ್ಥಾನಕ್ಕೆ ಡಾ.ಸಿ.ಆರ್‌. ಮಹೇಶ್‌ ಮತ್ತು ಡಾ. ಅನಿಲ್‌ ಕುಮಾರ್‌ ಈಸೋ ಅವರನ್ನು ನೇಮಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.