ADVERTISEMENT

ಗಲಭೆ; ಮತ್ತೆ ಎಂಟು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 20:20 IST
Last Updated 3 ಸೆಪ್ಟೆಂಬರ್ 2020, 20:20 IST
   

ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ), ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಹಾಗೂ ಕಾವಲ್‌ಭೈರಸಂದ್ರದಲ್ಲಿ ನಡೆದಿದ್ದ ಗಲಭೆ ಸಂಬಂಧ ಮತ್ತೆ ಎಂಟು ಆರೋಪಿಗಳನ್ನು ಪೂರ್ವ ವಿಭಾಗದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಸೈಯದ್ ಅಯಾಜ್, ಸೈಯದ್ ತಬ್ರೇಜ್, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಪಾಷಾ, ಜಮೀರ್ ಪಾಷಾ ಹಾಗೂ ಇಲಾಯಿದ್ ಬಂಧಿತರು. ಇನ್ನಿಬ್ಬರ ಹೆಸರು ಗೊತ್ತಾಗಿಲ್ಲ.

‘ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಆಗಸ್ಟ್ 11ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದರು. ವಿಡಿಯೊ ಹಾಗೂ ಮೊಬೈಲ್ ಕರೆಗಳ ವಿವರಗಳನ್ನು ಆಧರಿಸಿ ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.