ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಗೋದಾಮಿನಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಳೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಬೇಗೂರು ಸಮೀಪದ ಅಕ್ಷಯನಗರದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಆರಂಭದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗೋದಾಮಿಗೆ ಬೆಂಕಿ ತಗುಲಿದೆ ಎನ್ನಲಾಗಿತ್ತು. ಆದರೆ, ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಗೋದಾಮಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಕೆಲ ವಸ್ತುಗಳು ಸ್ಫೋಟಗೊಂಡಿವೆ ಎಂದು ತಿಳಿದುಬಂದಿದೆ.
ಗೋದಾಮಿನಲ್ಲಿದ್ದ ಪೇಪರ್ ಮತ್ತು ಹತ್ತಿಯ ರಟ್ಟಿನ ಪೆಟ್ಟಿಗೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ಅಗ್ನಿಶಾಮಕ ವಾಹನಗಳಲ್ಲಿ ಬಂದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಗುಜರಿ ಅಂಗಡಿ ಮಾಲೀಕರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.