ADVERTISEMENT

ಜಲಮಂಡಳಿ: ಫೋನ್‌ ಇನ್‌ ನಾಳೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 22:31 IST
Last Updated 10 ಸೆಪ್ಟೆಂಬರ್ 2025, 22:31 IST
   

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ.ರಾಮಪ್ರಸಾತ್‌ ಮನೋಹರ್‌ ಅವರ ನೇರ ಫೋನ್‌ ಇನ್‌ ಕಾರ್ಯಕ್ರಮವನ್ನು ಸೆ.12ರ ಶುಕ್ರವಾರ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30 ರಿಂದ 10.30ರವರೆಗೆ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರ ಬರುತ್ತಿರುವುದು, ಜಲಮಾಪನ ಹಾಗೂ ನೀರಿನ ಬಿಲ್‌ ಸಮಸ್ಯೆ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ದೂರವಾಣಿ ಸಂಖ್ಯೆ 080-22945119 ಮತ್ತು 080-22229639 ಸಂಪರ್ಕಿಸಬಹುದು.ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಬೇಕು ಎಂದು ಕೋರಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.