ADVERTISEMENT

ವಿದ್ಯುತ್ ವ್ಯತ್ಯಯ: ಪ‍ರಿಶೀಲನೆ

​ಪ್ರಜಾವಾಣಿ ವಾರ್ತೆ
Published 18 ಮೇ 2022, 20:25 IST
Last Updated 18 ಮೇ 2022, 20:25 IST

ಬೆಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ, ಹಲವಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ವಿದ್ಯುತ್ ಪೂರೈಕೆ ಸರಿಪಡಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಅವರು ಖುದ್ದು ಪ‍ರಿಶೀಲಿಸಿ, ಕಾಮಗಾರಿಗಳ ಮೇಲೆ ನಿಗಾವಹಿಸಿದರು. ಕೆಲವೆಡೆ ರಾತ್ರಿಯೇ ಸರಿಪಡಿಸಲಾಯಿತು.

ಬುಧವಾರ ರಾಜೇಂದ್ರ ಚೋಳನ್ ಅವರು ಕೆಂಗೇರಿ, ರಾಜರಾಜೇಶ್ವರಿ ನಗರ, ಕೋರಮಂಗಲ, ಎಚ್ ಎಸ್ಆರ್ ಬಡಾವಣೆ ಮತ್ತು ಇಂದಿರಾನಗರ ಬೆಸ್ಕಾಂ ವಲಯಗಳಿಗೆ ಖುದ್ದು ಭೇಟಿ ನೀಡಿ ವಿದ್ಯುತ್ ಪೂರೈಕೆ ಸರಿಪಡಿಸುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿದ್ಯುತ್ ವ್ಯತ್ಯಯ ವಿವರ: ಬೆಸ್ಕಾಂ ಸಹಾಯವಾಣಿ 1912ಗೆ ಮಂಗಳವಾರ ರಾತ್ರಿ 13734 ಕರೆಗಳು ಬಂದಿವೆ. ಬೆಸ್ಕಾಂ ಸಿಬ್ಬಂದಿ ಬುಧವಾರ ಬೆಳಗ್ಗೆ ವೇಳೆಗೆ ಎಲ್ಲ ಫೀಡರ್‌ಗಳ ದುರಸ್ತಿ ಮಾಡಿ ವಿದ್ಯುತ್ ಪೂರೈಕೆ ವ್ಯವಸ್ಥೆ ಸರಿಪಡಿಸಿದ್ದಾರೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT