ಬೆಂಗಳೂರು: ಭಾರತ್ ಬಂದ್ ಬೆಂಬಲಿಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ.
ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ, ಸ್ವಾತಂತ್ರ್ಯ ಉದ್ಯಾನ, ಕೆ.ಆರ್. ವೃತ್ತ, ನೃಪತುಂಗ ರಸ್ತೆ ಮೂಲಕ ಮೆರವಣಿಗೆ ಸಾಗುತ್ತಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಮೆರವಣಿಗೆ ಅಂತ್ಯವಾಗಲಿದೆ. ಅಲ್ಲಿಯೇ ಬಹಿರಂಗ ಸಭೆ ನಡೆಯಲಿದೆ.
ಕನ್ನಡಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.
ಮೆರವಣಿಗೆ ಸಾಗುತ್ತಿರುವ ರಸ್ತೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಅಕ್ಕ-ಪಕ್ಕದ ಅಂಗಡಿ, ಕಚೇರಿ ಮುಚ್ಚಿಸಲು ಪ್ರತಿಭಟನಕಾರರು ಯತ್ನಿಸುತ್ತಿದ್ದಾರೆ. ಅವರು ಯತ್ನವನ್ನು ಪೊಲೀಸರು ವಿಫಲಗೊಳಿಸಿ ಮೆರವಣಿಗೆ ಮುಂದಕ್ಕೆ ಕಳುಹಿಸುತ್ತಿದ್ದಾರೆ.
ಮೆರವಣಿಗೆಯಿಂದಾಗಿ ಮೆಜೆಸ್ಟಿಕ್, ಕಾರ್ಪೋರೇಷನ್ ಹಾಗೂ ಸುತ್ತಮುತ್ತ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಉಂಟಾಗಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.