ADVERTISEMENT

ಕೋವಿಡ್: ಸಿವಿಲ್ ಪೊಲೀಸ್ ವಾರ್ಡನ್ ಆಗಲು ಯುವಜನತೆಗೆ ಪೊಲೀಸ್ ಕಮಿಷನರ್ ಆಹ್ವಾನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 14:02 IST
Last Updated 14 ಜುಲೈ 2020, 14:02 IST
ಬೆಂಗಳೂರು ನಗರ ಪೊಲೀಸ್‌
ಬೆಂಗಳೂರು ನಗರ ಪೊಲೀಸ್‌    

ಬೆಂಗಳೂರು: ಮಂಗಳವಾರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ ಲಾಕ್‌ಡೌನ್‌ ಆಗುತ್ತಿದೆ. ಇದೇ ಸಮಯದಲ್ಲಿ ನಗರ ಪೊಲೀಸ್‌ ಕಮಿಷನರ್‌ ಭಾಸ್ಕರ್‌ ರಾವ್‌ ಸಿವಿಲ್ ಪೊಲೀಸ್ ವಾರ್ಡನ್ ಆಗಿ ಕೆಲಸ ಮಾಡಲು ಯುವಜನತೆಗೆ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ದೈಹಿಕವಾಗಿ ಸದೃಢವಾದ ಹಾಗೂ ಸೇವಾ ಮನೋಭಾವನೆಯುಳ್ಳ ಯುವಕ ಹಾಗೂ ಯುವತಿಯರಿಗೆ ಸಿವಿಲ್ ಪೊಲೀಸ್ ವಾರ್ಡನ್ ಆಗಲು ಮುಕ್ತ ಅವಕಾಶ ನೀಡಲಾಗುತ್ತಿದೆ’ ಎಂದಿದ್ದಾರೆ.

‘18ರಿಂದ 45 ವರ್ಷದೊಳಗಿನ ವ್ಯಕ್ತಿಗಳು ವಾರ್ಡನ್ ಆಗಲು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕೊರೊನಾ ವೈರಾಣು ವಿರುದ್ಧದ ಹೋರಾಟದಲ್ಲಿ ಸ್ಥಳೀಯ ಪೊಲೀಸ್ ಜೊತೆಯಲ್ಲಿ ಕೆಲಸ ಮಾಡಬೇಕು’ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ಸ್ವಯಂ ಸೇವಕರಾಗಲು ನೋಂದಣಿ ಮಾಡಿಕೊಳ್ಳಲು ಬೆಂಗಳೂರು ನಗರ ಪೊಲೀಸ್‌ ಇಲಾಖೆ ವೆಬ್‌ಸೈಟ್‌ http://bcp.gov.in ಭೇಟಿ ನೀಡುವಂತೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.