ADVERTISEMENT

ಗುಂಡಿ ತಪ್ಪಿಸಲು ಹೋಗಿ ಬಿದ್ದ ಯುವತಿ

​ಪ್ರಜಾವಾಣಿ ವಾರ್ತೆ
Published 28 ಮೇ 2019, 20:16 IST
Last Updated 28 ಮೇ 2019, 20:16 IST

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಮೆಟ್ರೊ ಕಾಮಗಾರಿ ನಡೆಯುತ್ತಿದ್ದು, ಹಲವೆಡೆ ಗುಂಡಿಗಳು ಬಿದ್ದಿವೆ. ಸ್ಕೂಟರ್ ಚಲಾಯಿಸುತ್ತಿದ್ದ ವೇಳೆ ಗುಂಡಿ ತಪ್ಪಿಸಲು ಹೋಗಿ ಯುವತಿಯೊಬ್ಬರು ಬಿದ್ದು ಗಾಯಗೊಂಡಿದ್ದಾರೆ.

ಬ್ಯಾಟರಾಯನಪುರ ಸಮೀಪದ ಪಂತರಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಆ ದೃಶ್ಯ ಕಾರೊಂದರ ಡ್ಯಾಶ್‌ಬೋರ್ಡ್‌ನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ದೊಡ್ಡ ಗುಂಡಿ ತಪ್ಪಿಸುವುದಕ್ಕಾಗಿ ಸ್ಕೂಟರ್‌ನ್ನು ಏಕಾಏಕಿ ಪಕ್ಕಕ್ಕೆ ಓಡಿಸಿದ್ದರು. ಅದೇ ವೇಳೆ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸಮೇತ ಕೆಳಗೆ ಬಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

‘ಮೆಟ್ರೊ ಕಾಮಗಾರಿ ನಡೆದಾಗಿನಿಂದ ರಸ್ತೆಯೆಲ್ಲ ಹಾಳಾಗಿ ಹೋಗಿದೆ. ದುರಸ್ತಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿದರೆ, ಮೆಟ್ರೊ ಕೆಲಸ ನಡೆಯುತ್ತಿರುವುದಾಗಿ ಸಬೂಬು ಹೇಳುತ್ತಿದ್ದಾರೆ. ಅದೃಷ್ಟವಶಾತ್ ಯುವತಿಗೆ ಏನು ಆಗಿಲ್ಲ. ಜೀವಕ್ಕೆ ಹಾನಿಯಾಗಿದ್ದರೆ ಯಾರು ಹೊಣೆ’ ಎಂದು ಸ್ಥಳೀಯರು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.