ADVERTISEMENT

ಮರಕ್ಕೆ ಬೈಕ್‌ ಡಿಕ್ಕಿ: ಪತಿ ಸಾವು, ಪತ್ನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 19:32 IST
Last Updated 17 ಆಗಸ್ಟ್ 2019, 19:32 IST
   

ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಸುಕಿನಲ್ಲಿ ಸಂಜಯನಗರದಲ್ಲಿ ನಡೆದಿದೆ.

ನಾಗಶೆಟ್ಟಿಹಳ್ಳಿ ನಿವಾಸಿ ಗಣೇಶ್‌ಕೃಷ್ಣ (30) ಮೃತಪಟ್ಟ ದುರ್ದೈವಿ. ಅವರ ಪತ್ನಿ ನಂದಿನಿ (27) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾಫ್ಟ್‌ವೇರ್‌ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಗಣೇಶ್‌ ಕೃಷ್ಣ, ಪತ್ನಿಯನ್ನು ನಸುಕಿನ 1 ಗಂಟೆ ಸುಮಾರಿಗೆ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಜಯನಗರ ಪೊಲೀಸ್‌ ಠಾಣೆ ಸಮೀಪ ಮುಖ್ಯರಸ್ತೆಯಲ್ಲಿ ಮಧ್ಯದಲ್ಲಿ‌ ಹಂಪ್‌ ಇರುವುದನ್ನು ಗಮನಿಸದೆ ಅತಿವೇಗವಾಗಿ ಬಂದು ನಿಯಂತ್ರಣ ಕಳೆದುಕೊಂಡ ಕಾರಣ, ಬೈಕ್‌ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಆರ್‌.ಟಿ. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.