ADVERTISEMENT

‍ಪೊಲೀಸ್ ಚೌಕಿಗೆ ಡಿಕ್ಕಿ; ಸಾವು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2018, 18:24 IST
Last Updated 21 ಅಕ್ಟೋಬರ್ 2018, 18:24 IST

ಬೆಂಗಳೂರು: ವಿಂಡ್ಸರ್ ಮ್ಯಾನರ್ ವೃತ್ತದ ಪೊಲೀಸ್ ಚೌಕಿಗೆ ಬೈಕ್ ಡಿಕ್ಕಿಯಾಗಿ ಖಾಸಗಿ ಆಸ್ಪತ್ರೆಯೊಂದರ ರೇಡಿಯಾಲಜಿಸ್ಟ್ ಶರಣ್ (22) ಮೃತಪಟ್ಟಿದ್ದಾರೆ.

ಅವರು ವೆಲ್ಲೂರಿನವರಾಗಿದ್ದು, ಆರು ತಿಂಗಳ ಹಿಂದೆ ನಗರಕ್ಕೆ ಬಂದು ಹೆಬ್ಬಾಳದಲ್ಲಿ ನೆಲೆಸಿದ್ದರು. ಕೆಲಸ ಮುಗಿಸಿಕೊಂಡು ಭಾನುವಾರ ನಸುಕಿನ ವೇಳೆ (1.50ರ ಸುಮಾರಿಗೆ ) ಸ್ನೇಹಿತನನ್ನು ಕೂರಿಸಿಕೊಂಡು ಬೈಕ್‌ನಲ್ಲಿ ಮನೆಗೆ ಮರಳುವಾಗ ಈ ದುರಂತ ಸಂಭವಿಸಿದೆ.

ವೇಗವಾಗಿ ಬೈಕ್ ಓಡಿಸಿಕೊಂಡು ಬಂದಿರುವ ಶರಣ್, ತಿರುವು ಪಡೆಯುವಾಗ ನಿಯಂತ್ರಣ ಕಳೆದುಕೊಂಡಿದ್ದಾರೆ. ಆಗ ಅಡ್ಡಾದಿಡ್ಡಿಯಾಗಿ ಸಾಗಿದ ಬೈಕ್, ಚೌಕಿಗೆ ಅಪ್ಪಳಿಸಿದೆ. ಹೆಲ್ಮೆಟ್ ಧರಿಸಿರದ ಕಾರಣ ಶರಣ್ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅವರ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೈಗ್ರೌಂಡ್ಸ್ ಸಂಚಾರ ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.