ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯ ನಾಗರಬಾವಿ ಬಳಿ ದ್ವಿಚಕ್ರ ವಾಹನ ಸವಾರರೊಬ್ಬರ ಮೇಲೆ ವೈದ್ಯೆಯೊಬ್ಬರು ಕಾರು ಹರಿಸಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮೇ 21ರಂದು ಅಪಘಾತ ಸಂಭವಿಸಿದ್ದು, ಸವಾರ ಹಾಗೂ ವೈದ್ಯ ರಾಜಿ ಸಂಧಾನ ಮಾಡಿಕೊಂಡಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.
‘ವೈದ್ಯೆ ಚಲಾಯಿಸುತ್ತಿದ್ದ ಕಾರು, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಉಜ್ಜಿಕೊಂಡು ಹೋಗಿತ್ತು. ಅಪಘಾತವಾದರೂ ಕಾರು ನಿಲ್ಲಿಸದ ವೈದ್ಯೆ, ಸವಾರನ ಮೇಲೆಯೇ ಚಕ್ರ ಹರಿಸಿದ್ದರು. ಅಪಘಾತದಿಂದಾಗಿ ಸವಾರನ ಬೆನ್ನು ಹಾಗೂ ಕಾಲುಗಳಿಗೆ ಗಾಯಗಳಾಗಿವೆ’ ಎಂದೂ ಮೂಲಗಳು ತಿಳಿಸಿವೆ.
‘ಚಿಕಿತ್ಸೆ ಕೊಡಿಸಿ, ಪರಿಹಾರ ನೀಡುವುದಾಗಿ ಸವಾರನಿಗೆ ವೈದ್ಯೆ ಭರವಸೆ ನೀಡಿದ್ದಾರೆ. ಹೀಗಾಗಿ, ಸವಾರ ಯಾವುದೇ ದೂರು ನೀಡಿಲ್ಲ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.