ADVERTISEMENT

ಕ್ಯಾಂಟರ್‌ಗೆ ಬೈಕ್ ಡಿಕ್ಕಿ: ಡೆಲಿವರಿ ಬಾಯ್ ಸಾವು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 20:26 IST
Last Updated 20 ಮಾರ್ಚ್ 2023, 20:26 IST
   

ಬೆಂಗಳೂರು: ಬನಶಂಕರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕ್ಯಾಂಟರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರ ಗೌತಮ್ (26) ಎಂಬುವವರು ಮೃತ ಪಟ್ಟಿದ್ದಾರೆ.

‘ತ್ಯಾಗರಾಜನಗರದ ಗೌತಮ್ ಆಹಾರ ಡೆಲಿವರಿ ಬಾಯ್ ಆಗಿದ್ದರು. ಭಾನುವಾರ ರಾತ್ರಿ ಸ್ನೇಹಿತ ಕಾರ್ತಿಕ್ ಜತೆ ಬೈಕ್‌ನಲ್ಲಿ ಮನೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಕಾರ್ತಿಕ್ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ
ದ್ದಾರೆ’ ಎಂದು ಪೊಲೀಸರು ಹೇಳಿದರು.

'ತ್ಯಾಗರಾಜನಗರದ 14ನೇ ಮುಖ್ಯರಸ್ತೆಯ ಬದಿಯಲ್ಲಿ ಕ್ಯಾಂಟರ್ ನಿಲ್ಲಿಸಲಾಗಿತ್ತು. ಅದೇ ರಸ್ತೆಯಲ್ಲಿ ಹೊರಟಿದ್ದ ಗೌತಮ್, ಕ್ಯಾಂಟರ್ ಗಮನಿಸಿರಲಿಲ್ಲ. ಅವರು ಚಲಾಯಿಸುತ್ತಿದ್ದ ಬೈಕ್, ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಗೌತಮ್ ಹಾಗೂ ಹಿಂಬದಿ ಸವಾರ ಕಾರ್ತಿಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು.’

ADVERTISEMENT

‘ಆಸ್ಪತ್ರೆಯಲ್ಲಿ ಗೌತಮ್ ಮೃತಪಟ್ಟಿದ್ದಾರೆ. ಬೇಕಾಬಿಟ್ಟಿಯಾಗಿ ರಸ್ತೆ ಬದಿ ಕ್ಯಾಂಟರ್‌ ನಿಲ್ಲಿಸಿದ್ದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.