ADVERTISEMENT

ನಿಯಂತ್ರಣ ತಪ್ಪಿದ ಬೈಕ್‌: ಹಿಂಬದಿ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 19:24 IST
Last Updated 7 ಸೆಪ್ಟೆಂಬರ್ 2022, 19:24 IST
   

ಬೆಂಗಳೂರು: ಎಚ್‌ಎಸ್‌ಆರ್‌ ಲೇಔಟ್‌ನ ಹೊರವರ್ತುಲ ರಸ್ತೆಯಲ್ಲಿ ಬುಧವಾರ ಮುಂಜಾನೆ ಬೈಕ್‌ ಒಂದು ರಸ್ತೆಯ ಉಬ್ಬು ದಾಟುವಾಗ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿ ಸವಾರ ಶ್ರೀಪತಿರಾವ್‌ (57) ಎಂಬುವರು ಮೃತಪಟ್ಟಿದ್ದಾರೆ. ಬೈಕ್‌ ಸವಾರ ಕಾರ್ತಿಕ್‌ (25) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿದ್ದ ಶ್ರೀಪತಿರಾವ್‌ ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಸವಾರನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ. ತಡರಾತ್ರಿ ಮಾರುಕಟ್ಟೆ ಪ್ರದೇಶದಲ್ಲಿ ಊಟಕ್ಕೆ ಬೈಕ್‌ನಲ್ಲಿ ತೆರಳುವಾಗ ಈ ಅವಘಡ ಸಂಭವಿಸಿದೆ’ ಎಂದು ನಾಗೇಶ್‌ ಎಂಬುವವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.