ADVERTISEMENT

ಬೆಂಗಳೂರು: ಪೀಣ್ಯ ಮೇಲ್ಸೇತುವೆಯಿಂದ ಬಿದ್ದು ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 16:13 IST
Last Updated 13 ಏಪ್ರಿಲ್ 2024, 16:13 IST
<div class="paragraphs"><p>ಸಾವು (ಸಾಂಕೇತಿಕ ಚಿತ್ರ)</p></div>

ಸಾವು (ಸಾಂಕೇತಿಕ ಚಿತ್ರ)

   

ಬೆಂಗಳೂರು: ಪೀಣ್ಯ ಮೇಲ್ಸೇತುವೆಯಲ್ಲಿ ಶನಿವಾರ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಬಿದ್ದು ಬೈಕ್ ಸವಾರ ಪ್ರಸಾದ್ (38) ಮೃತಪಟ್ಟಿದ್ದಾರೆ.

‘ಮಹಾಲಕ್ಷ್ಮಿ ಲೇಔಟ್‌ ಬಳಿಯ ಕೃಷ್ಣಾನಂದನಗರದ ಪ್ರಸಾದ್‌, ದಾಸನಪುರ ಎಪಿಎಂಪಿ ಮಾರುಕಟ್ಟೆಯ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಶನಿವಾರ ಬೆಳಿಗ್ಗೆ ಮನೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೀಣ್ಯ ಸಂಚಾರ ಠಾಣೆ ಪೊಲೀಸರು ಹೇಳಿದರು.

ADVERTISEMENT

‘ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೀಣ್ಯ ಮೇಲ್ಸೇತುವೆಯಲ್ಲಿ ಪ್ರಸಾದ್ ಹೊರಟಿದ್ದರು. ಜಾಲಹಳ್ಳಿ ಸಮೀಪದ ರಾಕ್‌ಲೈನ್‌ ಮಾಲ್‌ ಬಳಿ ಮೇಲ್ಸೇತುವೆಯಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿತ್ತು. ಅಪಘಾತದಿಂದಾಗಿ ಬೈಕ್‌ನಿಂದ ಹಾರಿದ್ದ ಪ್ರಸಾದ್, ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಬಿದ್ದಿದ್ದರು. ತೀವ್ರ ಗಾಯಗೊಂಡು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

‘ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಚಾಲಕನ ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.