ADVERTISEMENT

ವಿಲಾಸಿ ಜೀವನಕ್ಕೆ ಬೈಕ್‌ ಕಳವು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 19:15 IST
Last Updated 23 ಆಗಸ್ಟ್ 2022, 19:15 IST
ಬೈಕ್‌ ಕಳವು ಆರೋಪಿಯೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ ತಂಡ
ಬೈಕ್‌ ಕಳವು ಆರೋಪಿಯೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ ತಂಡ   

ಬೆಂಗಳೂರು: ಕದ್ದ ಬೈಕ್‌ಗಳನ್ನು ಮಾರಾಟ ಮಾಡಿ ಅದರಿಂದ ಬರುವ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕಗ್ಗಲಿ ಹೊಸಹಳ್ಳಿಯ ಆರೋಪಿ ಮುನಿರಾಜು (45) ಎಂಬಾತನನ್ನು ಕೆ.ಆರ್‌.ಪುರ ಪೊಲೀಸರು ಬಂಧಿಸಿದ್ಧಾರೆ.

ಬಂಧಿತನಿಂದ ₹ 9 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 10 ಬೈಕ್‌, ಒಂದು ಕಾರು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಕೆ.ಆರ್.ಪುರ, ಹೆಣ್ಣೂರು, ಬಾಣಸವಾಡಿ, ಯಲಹಂಕ, ನ್ಯೂಟೌನ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣೆ ಹಾಗೂ ಕೋಲಾರ ಜಿಲ್ಲೆಯ ಗಲ್‌ಪೇಟೆ ವ್ಯಾಪ್ತಿಯಲ್ಲಿ ಆರೋಪಿ ವಾಹನ ಕಳವು ಮಾಡಿದ್ದ. ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳನ್ನು ಕಳವು ಮಾಡಿ ತನ್ನ ಊರಿನ ತೋಟದ ಮನೆಯ ಖಾಲಿ ಪ್ರದೇಶದಲ್ಲಿ ನಿಲ್ಲಿಸುತ್ತಿದ್ದ. ಅಲ್ಲಿಂದ ಮಧ್ಯವರ್ತಿಗಳಿಗೆ ಮಾರಾಟ ಮಾಡಿ ಅದರಿಂದ ಬರುವ ಹಣವನ್ನು ಮೋಜು, ಮಸ್ತಿಗೆ ಬಳಸುತ್ತಿದ್ದ ಎಂದು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.