ಬೆಂಗಳೂರು: ನಗರದ ಬಳ್ಳಾರಿ ರಸ್ತೆಯಲ್ಲಿರುವ ಜಿಕೆವಿಕೆ ಬಳಿ ಭಾನುವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಬೆಳಿಗ್ಗೆ 6.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರನ್ನು ನಾಗವಾರ ಗೋವಿಂದಪುರದ ಮಹ್ಮದ್ ಹದಿ, ಅಹಮದ್ ಖಾನ್ ಹಾಗೂ ಸೈಯದ್ ರಿಯಾಜ್ ಎಂದು ಗುರುತಿಸಲಾಗಿದೆ.
‘ಮೂವರು ಯುವಕರು ವ್ಹೀಲಿಂಗ್ ಮಾಡಲು ಬಂದಿದ್ದರು ಎನ್ನಲಾಗಿದೆ. ವ್ಹೀಲಿಂಗ್ ಮಾಡುತ್ತಿದ್ದ ವೇಳೆಯೇ ಯುವಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದಾರೆ’ಎಂದು ಯಲಹಂಕ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.